ಬುಧವಾರ, ಆಗಸ್ಟ್ 12, 2015

ರೈತರ ಆತ್ಮಹತ್ಯೆ ಪ್ರಕರಣದ ಬಗ್ಗೆ ರಾಜ್ಯ ಮುಖ್ಯಮಂತ್ರಿಗಳ ಅಭಿಪ್ರಾಯ ಏನು?

ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ: ರಾಜ್ಯ ಸರ್ಕಾರಕ್ಕೆ ರೈತರ ಸಾಲ ಮನ್ನಾ ಮಾಡುವ ಯೋಗ್ಯತೆ ಇಲ್ಲದಿದ್ದರೆ ರಾಜಿನಾಮೆ ಕೊಟ್ಟು ತೊಲಗಲಿ. ಅಧಿಕಾರದಿಂದ ಕೆಳಗಿಳಿಯುವ ಪೂರ್ವದಲ್ಲಿ ಸಾಲ ಮನ್ನಾ ಘೋಷಣೆ ಮಾಡಿ ಹೋಗಲಿ, ಮುಂಬರುವ ಸರ್ಕಾರ ಸಾಲ ತೀರಿಸುತ್ತದೆ.
ರೈತರ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸರ್ಕಾರ ಲಘುವಾಗಿ ಪರಿಗಣಿಸಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ರೈತರ ಕುಟುಂಬಕ್ಕೆ ಸರ್ಕಾರ ಅನಾಥ ಭಾಗ್ಯ ಕರುಣಿಸುತ್ತಿದೆ. ಸಾಲ ಮನ್ನಾ ಮಾಡುವುದಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಂಕಾರದ ಮಾತುಗಳನ್ನಾಡುತ್ತಿದ್ದಾರೆ. ರೈತರ ನೆರವಿಗೆ ಬಾರದವರು ಅಧಿಕಾರದಿಂದ ಕೆಳಗಿಳಿಯಲಿ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ: ರೈತರ ಆತ್ಮಹತ್ಯೆ ತಡೆಯಲು ಕರ್ನಾಟಕ ಸರ್ಕಾರ ತಕ್ಷಣವೇ ಬೆಳೆ ಸಾಲ ಮನ್ನಾ ಮಾಡಬೇಕು ಹಾಗೂ ರಾಷ್ಟ್ರೀಯ ಬ್ಯಾಂಕುಗಳಲ್ಲಿ ರೈತರು ಪಡೆದಿರುವ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು.
ರೈತರಿಗೆ ಪರಿಹಾರ ನೀಡಲು ಶೇ.75ರಷ್ಟು ಕೇಂದ್ರದಿಂದ ಅನುದಾನ ನೀಡುವುದಾಗಿ ಹಣಕಾಸು ಸಚಿವರು ಭರವಸೆ ನೀಡಿದ್ದರೂ, ರಾಜ್ಯ ಸರ್ಕಾರ ತನ್ನ ಪಾಲು ಶೇ 25ರಷ್ಟು ಭರಿಸಲು ಮುಂದೆ ಬಂದಿಲ್ಲ.
ಮುಖ್ಯಮಂತ್ರಿ ಸಿದ್ದರಾಮಯ್ಯ:
ರಾಜ್ಯದಲ್ಲಿ ನಡೆಯುತ್ತಿರುವ ರೈತರ ಸರಣಿ ಆತ್ಮಹತ್ಯೆ ತಡೆಗೆ ಸಾಲ ಮನ್ನಾವೊಂದೇ ಪರಿಹಾರವಲ್ಲ. ಮೀಟರ್ ಬಡ್ಡಿ ಪ್ರಕರಣ ಸಂಬಂಧಿಸಿದಂತೆ ರಾಜ್ಯಾದ್ಯಂತ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಒಂದು ತಿಂಗಳ ಅವಧಿಯಲ್ಲಿ ಒಂದು ಸಾವಿರ ಪ್ರಕರಣಗಳನ್ನು ದಾಖಲಿಸಿಕೊಂಡು 560 ಜನರನ್ನು ಬಂಧಿಸಲಾಗಿದೆ.  ರೈತರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡುವುದರ ವಿರುದ್ಧ ಕೂಡ ಕ್ರಮ ಕೈಗೊಳ್ಳಲಾಗಿದೆ.

ಕುಮಾರಣ್ಣನಿಗೆ ಸರಕಾರ ಉರುಳಿಸುವ ಅವಸರ, ಯಡ್ಡಿಗೆ ತನ್ನ ಅಸ್ತಿತ್ವ ಮತ್ತು ವಿಶ್ವಾಸ ಉಳಿಸಿಕೊಳ್ಳುವ ಹಂಬಲ, ಸಿದ್ದಣ್ಣನಿಗೆ ಸರಕಾರ ಉಳಿಸಿಕೊಳ್ಳುವ ಜವಾಬ್ದಾರಿ. ಈ ಕಾರಣಕ್ಕಾಗಿ ರೈತರ ಪ್ರಕರಣಗಳಲ್ಲಿ ಒಂದು ನಿಶ್ಚಯವಾದ ನಿರ್ಧಾರವನ್ನು ಇವರಿಂದ ಕೈಗೊಳ್ಳಲಾಗುತ್ತಿಲ್ಲ. ಒಟ್ಟಿನಲ್ಲಿ ಇವರ ಚರ್ಚೆ, ಆರೋಪ, ಪ್ರತ್ಯಾರೋಪ, ಒಣ ಜಂಭಗಳು ಮುಗಿಯುವ ಸಮಯದಲ್ಲಿ ರಾಜ್ಯದಲ್ಲಿ ಒಬ್ಬನಾದರೂ ರೈ ಉಳಿದಿದ್ದರೆ ಕರ್ನಾಟಕದ ಜನತೆ ನಾವು ಹೆಮ್ಮೆಪಡೋಣ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ